Quantcast
Channel: Kannada Dunia | Kannada News | Karnataka News | India News
Viewing all articles
Browse latest Browse all 122063

ಕರಾಚಿಯ ಪ್ರೀತಿಯನ್ನು ಬಿಚ್ಚಿಟ್ಟ ಬಿಜೆಪಿ ಭೀಷ್ಮ

$
0
0

17mn_UDGVPHI-W1_18_2700383e

17mn_UDGVPHI-W1_18_2700383e ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪಾಕ್ ಕುರಿತಾಗಿ ಮೃದು ಧೋರಣೆ ತಾಳುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ನಡುವೆಯೇ ಬಿಜೆಪಿ ಭೀಷ್ಮ ಎಲ್.ಕೆ. ಆಡ್ವಾಣಿ, ನನಗೆ ಕರಾಚಿ ಎಂದರೆ ಅಚ್ಚುಮೆಚ್ಚು ಎನ್ನುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಹೌದು. ಪೇಜಾವರ ಶ್ರೀಗಳ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಉಡುಪಿಗೆ ಆಗಮಿಸಿದ್ದ ಸಮಯದಲ್ಲಿ ಪ್ರವಾಸಿ ಬಂಗಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಡ್ವಾಣಿ, ಬಿಜೆಪಿ ದಕ್ಷಿಣ ಭಾರತದ ಯಾವುದೇ ಜಿಲ್ಲೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗದಿದ್ದ ಕಾಲದಲ್ಲಿ ಉಡುಪಿ ನಗರಸಭೆಯಲ್ಲಿ ಅಧಿಕಾರಕ್ಕೇರಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸ್ಥಾನ ಕಲ್ಪಿಸಿಕೊಟ್ಟಿತ್ತು. ಈ ಕಾರಣದಿಂದಲೂ ತಮಗೆ ಉಡುಪಿ ಎಂದರೆ ಹೆಮ್ಮೆ ಎಂದರಲ್ಲದೇ ನಾನು ಹುಟ್ಟಿದ ಕರಾಚಿ ಬಿಟ್ಟರೆ ನನಗೆ ಕರ್ನಾಟಕವೇ ಅಚ್ಚುಮೆಚ್ಚು. ಅದರಲ್ಲೂ ಉಡುಪಿ ನಗರವೆಂದರೆ ಮತ್ತಷ್ಟು ಇಷ್ಟ ಎಂದು ಭಾವುಕರಾಗಿ ನುಡಿದರು. ಅಲ್ಲದೇ ಪೇಜಾವರ ಶ್ರೀಗಳು, ಜನಸಂಘದ ಕಾಲದಿಂದಲೂ ನನಗೆ ಮತ್ತು ಅನೇಕ ರಾಜಕೀಯ ನಾಯಕರಿಗೆ ಮಾರ್ಗದರ್ಶಕರಾಗಿದ್ದರು. ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿ ಶ್ರೀಗಳು ಧೈರ್ಯ ತುಂಬಿದ್ದರು ಎಂದು ಸ್ಮರಿಸಿದ ಅಡ್ವಾಣಿ, ಅವರ ಪರ್ಯಾಯೋತ್ಸವದಲ್ಲಿ ಭಾಗವಹಿಸುವುದೇ ಒಂದು ಭಾಗ್ಯ ಎಂದು ತಿಳಿಸಿದ್ದಾರೆ.

Viewing all articles
Browse latest Browse all 122063

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>